ಉಡುಪಿ (ಅಕ್ಟೋಬರ್ 27): ರಾಜ್ಯದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಕ್ಟೋಬರ್ 28 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7 ರಿಂದ 8 ರ ವರೆಗೆ ಕೋಟ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಂತರ ಕೇರಳಕ್ಕೆ ತೆರಳುವರು.