ಉಡುಪಿ ಮಾರ್ಚ್ 19 (ಕರ್ನಾಟಕ ವಾರ್ತೆ): ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಕಾರ್ಕಳ ಇವರ ವತಿಯಿಂದ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ಕಾರ್ಕಳ ತಹಶೀಲ್ದಾರರ ಕಛೇರಿ ಮುಂಭಾಗದಲ್ಲಿ ಕೋವಿಡ್-19 ಆರೋಗ್ಯ ಜಾಗೃತಿ ರಥಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.