ಬೆಂಗಳೂರು:-ಕೋವಿಡ್ -19ರ ಸೋಂಕು ದೃಢಪಟ್ಟಿದ್ದು, ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, "ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ ಎಂದಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ" ಎಂದು ಹೇಳಿದ್ದಾರೆ.