ಬಿಂದಿಯಾ ಶೆಟ್ಟಿ

ಭಾರತ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನೆಯ ಮುಖಾಂತರ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗ್ರಾಮೀಣ ಸಮಾಜಗಳ ಸರ್ವಾಂಗೀಣ ಅಭಿವೃದ್ದಿಗೆ ಮತ್ತು ಸಮಾಜಿಕ, ಶೈಕ್ಷಣಿಕವಾಗಿ ಸರ್ವತೋಮುಖ ಅಭಿವೃದ್ಧಿಯಲ್ಲಿ ಭಾಗಿಯಾಗುವ ವಿಶ್ವವಿದ್ಯಾಲಯಗಳು, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರು ಮತ್ತು ಕಾರ್ಯಕ್ರಮಗಳು ಹಾಗೂ ಸ್ವಯಂಸೇವಕ ಸೇವಕಿಯರು ಗಳಿಗೆ ರಾಷ್ಟ್ರಮಟ್ಟದಲ್ಲಿ ನೀಡುವ “ರಾಷ್ಟ್ರ ಪ್ರಶಸ್ತಿಗಳು” ಪ್ರಕಟವಾಗಿರುತ್ತವೆ. ಕರ್ನಾಟಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಆಯಾಮಗಳಲ್ಲಿ ವಿಶ್ವವಿದ್ಯಾಲಯದ ಮುಖಾಂತರ ಸೇವೆ ಸಲ್ಲಿಸಿರುವ ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಯು ಕರ್ನಾಟಕ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕರಾದ ಡಾ. ಬಿ. ವಸಂತ ಶೆಟ್ಟಿ ರವರಿಗೆ ರಾಷ್ಟ್ರಪ್ರಶಸ್ತಿ ಪ್ರಕಟವಾಗಿರುತ್ತದೆ. ಕಾಲೇಜು ಮಟ್ಟದ ಕಾರ್ಯಕ್ರಮ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪ್ರಶಸ್ತಿಯು ಧಾರವಾಡದ ಜೆಎಸ್‌ಎಸ್‌ ಬನಶಂಕರಿ ಕಲಾ ಮತ್ತು ವಾಣಿಜ್ರನ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ಸುರೇಶಪ್ಪ ಕೆ ಸಜ್ಜನ ರವರಿಗೆ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸಿದ ಸ್ವಯಂಸೇವಕ ಸೇವಕರಿಗೆ ನೀಡಲಾಗುವ ರಾಷ್ಟ್ರ ಪ್ರಶಸ್ತಿ ವಿಭಾಗದಲ್ಲಿ ಬೆಂಗಳೂರಿನ ಕೆಎಸ್ ಇನ್ನಿಟೂಟ್ ಆಫ್ ಟೆಕ್ನಾಲಜಿಯ ಸ್ವಯಂಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರಿನ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಸ್ವಯಂಸೇವಕಿ ಬಿಂದಿಯಾ ಶೆಟ್ಟಿ ಇವರುಗಳಿಗೆ ರಾಷ್ಟ್ರಪ್ರಶಸ್ತಿ ಪ್ರಕಟವಾಗಿರುತ್ತದೆ. ಕರ್ನಾಟಕ ರಾಜ್ಯದಿಂದ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿರುವ ಇವರುಗಳಿಗೆ ಪ್ರಶಸ್ತಿ ಪ್ರದಾನವು ದೇಶದ ರಾಷ್ಟ್ರಪತಿಗಳಿಂದ ಸೆಪ್ಟೆಂಬರ್ 24 ನೇ ತಾರೀಖಿನಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಕಾಪನಾ ದಿನಾಚರಣೆ ಅಂಗವಾಗಿ ನಡೆಯುವ ರಾಷ್ಟ್ರಪತಿಗಳ ಭವನದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ನೀಡಲಿದ್ದಾರೆ.

ಕರ್ನಾಟಕ ರಾಜ್ಯದ ಸರ್ವತೋಮುಖ ಬೆಳವಣಿಗೆಯಲ್ಲಿ ಕಾರಣೀಭೂತರಾದ ಮತ್ತು ಮಹಾತ್ಮ ಗಾಂಧೀಜಿಯವರ ಕನಸಿನ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಪ್ರಶಸ್ತಿಯನ್ನು ಪಡೆಯುತ್ತಿರುವ ಇವರುಗಳಿಗೆ ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಕೋಶವು ಪತ್ರಿಕಾ ಪ್ರಕಟಣೆಯಲ್ಲಿ ಪ್ರಕಟಿಸಿ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದೆ. ಇವರ ಸಾಧನೆಯು ಕೊವಿಡ್ ಸಂದರ್ಭದಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ ಎಲ್ಲಾ ರಾಜ್ಯದ ಸ್ವಯಂಸೇವಕ ಸೇವಕಿಯರು ಗಳಿಗೆ ಸ್ಫೂರ್ತಿದಾಯಕ ಆಗಿದೆ.