ಮಂಗಳೂರು: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ2 ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಸಮಗ್ರ ಅನುಷ್ಟಾನಕ್ಕಾಗಿ ದ.ಕ ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಮಿತಿಯನ್ನು ಜಿಲ್ಲಾ  ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಪುನರ್‍ರಚಿಸಲಾಯಿತು. 

ಸಮಿತಿಯಲ್ಲಿ ಜಿಲ್ಲಾ ನೋಡಲ್‍ ಅಧಿಕಾರಿ (ಸ್ವಭಾಮಿ) ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ ಮತ್ತು ಜಿಲ್ಲಾ ನಗರಾಭಿವೃದ್ಧಿಕೋಶ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಕಾರ್ಯನಿರ್ವಾಹಕ ಇಂಜಿನಿಯರ್, ಜಿಲ್ಲಾ ಶಿಕ್ಷಣಾಧಿಕಾರಿ (ಸಾರ್ವಜನಿಕ ಶಿಕ್ಷಣ ಇಲಾಖೆ), ಕಾರ್ಯನಿರ್ವಾಹಕ ಅಭಿಯಂತರರು( ಪಂಚಾಯತ್‍ ರಾಜ್), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ, ಪಂಚಾಯತ್ ಮಹಿಳಾ ಅಧ್ಯಕ್ಷರು, ರಾಮಕೃಷ್ಣ ಮಿಷನ್ ಮಂಗಳೂರು ಇದರ ಪ್ರತಿನಿಧಿಗಳು, ಸ್ವಭಾಮಿ ಸಮಾಲೋಚಕರು ಉಪಸ್ಥಿತರಿದ್ದರು.