ಕೆರ್ವಾಶೆ, ಕಾರ್ಕಳ:  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ಉಚಿತ ಸಮವಸ್ತ್ರ ವಿತರಣೆ ಹಾಗೂ ದಾನಿಗಳಿಂದ ಕೊಡಲ್ಪಟ್ಟ ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಸ್ ಡಿ ಎಮ್ ಸಿ ಯ ಗೌರವಾನ್ವಿತ ಅಧ್ಯಕ್ಷರಾಗಿರುವ  ನಾರಾಯಣ ಗುಡಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಸುನಿಲ್ ಶೆಟ್ಟಿ,ಗ್ರಾಮ ಪಂಚಾಯತ್ ಕೆರ್ವಾಶೆ. ಧರ್ಮರಾಜ್ ಹೆಗ್ಡೆ ಗ್ರಾಮ ಪಂಚಾಯತ್ ಸದಸ್ಯರು ಕೇರ್ವಾಶೆ, ಹಿರಿಯರೂ, ಶಿಕ್ಷಣಾಭಿಮಾನಿಯಾಗಿರುವ ರಾಮಣ್ಣ ಸೇರ್ವೆಗಾರ್, ಉಮೇಶ್ ಕೆ. ಎಸ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕಾರ್ಕಳ, ಇವರು ಭಾಗವಹಿಸಿದ್ದರು. ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ರೂಪ ಡಿ ಶೆಟ್ಟಿ, ಎಸ್ ಡಿ ಎಂ ಸಿ ಯ ಸದಸ್ಯರು, ಹಳೆ ವಿದ್ಯಾರ್ಥಿಗಳು, ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಹಶಿಕ್ಷಕಿ  ಸುನೀತಾ ನಾಯಕ್ ಎಲ್ಲರನ್ನು ಸ್ವಾಗತಿಸಿದರು. ಮುಖ್ಯ ಶಿಕ್ಷಕಿ  ಪ್ರಮೀಳಾ ಪ್ರಸ್ತಾವನೆಗೈದರು, ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.  ಸುಪ್ರೀತಾ ಸಹಕರಿಸಿದರು ಹಾಗೂ ಸೌಮ್ಯ ವಂದಿಸಿದರು.