ಕಾರ್ಕಳ: ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಎಸ್ ಜೆ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರ ರೀತಿಯಲ್ಲಿ ಕೊಲೆಗೈದಿದ್ದಾರೆ.
ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಅಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.