ಮಂಗಳೂರು: ದುಷ್ಕರ್ಮಿಗಳಿಂದ  ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ  ಅಬ್ದುಲ್ ರಹಿಮಾನ್ ಮನೆಗೆ  ವಿಧಾನಸಭಾ ಸ್ಪೀಕರ್  ಯು.ಟಿ ಖಾದರ್ ಅವರು ಬುಧವಾರ ಭೇಟಿ ನೀಡಿದರು. 

ರಹಿಮಾನ್ ತಂದೆ ತಾಯಿ ಮತ್ತು ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು  ಸಾಂತ್ವನ ಹೇಳಿದರು. ಸ್ಥಳೀಯ ಮುಖಂಡರೊಂದಿಗೆ ಸಂವಾದ ನಡೆಸಿದ ಅವರು, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದರು.