ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಲೋಕ ಸಭಾ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೇ, ಬಂದರು, ವಿಮಾನ ನಿಲ್ದಾಣ, ಸ್ಮಾರ್ಟ್ ಸಿಟಿ, ಆದರ್ಶ ಗ್ರಾಮ ಯೋಜನೆ ಸೇರಿದಂತೆ  ಅಭಿವೃದ್ಧಿಗೆ 1,80,000  ಕೋಟಿ ರೂಪಾಯಿ ಮೊತ್ತದ ಅನುದಾನ ವೆಚ್ಚಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಜಿಲ್ಲೆಯ ಅಭಿವೃದ್ಧಿಗೆ ಶ್ರೀನಿವಾಸ ಮಲ್ಯರಿಂದ  ಹಿಡಿದು ಬಳಿಕ ಬಂದ ಎಲ್ಲಾ ಸಂಸದರ ಶಾಸಕರ, ಸಚಿವರ ಕೊಡುಗೆ ಇದೆ ಆ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರದ ಅತ್ಯಂತ ಹೆಚ್ಚು ಅಭಿವೃದ್ಧಿಶೀಲ  ಜಿಲ್ಲೆಯಾಗಿ ಖ್ಯಾತಿ ಪಡೆದಿದೆ. 15 ವರ್ಷಗಳ ಕಾಲ ನನ್ನ ಅಧಿಕಾರಾವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವೇಗ ದೊರೆತಿದೆ. ಹಿಂದೆ ಸುರತ್ಕಲ್‍ನಲ್ಲಿ ಕೆಆರ್‍ಇಸಿ ಇದ್ದದ್ದನ್ನು ಎನ್‍ಐಟಿಕೆ ಮಾಡಿ ಅಭಿವೃದ್ಧಿಪಡಿಸಲಾಗಿದೆ. ಮಂಗಳೂರು ಬಂದರನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 4,000 ಕೋಟಿ ರೂಪಾಯಿ ಅನುದಾನ ನೀಡಿ ಅಭಿವೃದ್ಧಿ ಯೋಜನೆಗೆ ಅವರೇ ಶಿಲಾನ್ಯಾಸ ಮಾಡಿದ್ದರು. ಈಗ ಮಾದರಿ ಪೋರ್ಟ್ ಆಗಿದೆ. 2,010 ಬಳಿಕ ರಾಜ್ಯದ ಎರಡನೆ ದೊಡ್ಡ ವಿಮಾನ ನಿಲ್ದಾಣವಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ 24 ಗಂಟೆ ಚಾಲನೆಯಲ್ಲಿದೆ. ನಾನು ಸಂಸದನಾದ ಆರಂಭದ ಹೊತ್ತಿಗೆ ಮಧ್ಯಾಹ್ನದ ವರೆಗೆ ಮಾತ್ರ ಕಾರ್ಯಾಚರಣೆ ಇತ್ತು. ಈಗ  ಅಂತಾರಾಷ್ಟ್ರೀಯ ವಿಮಾನಗಳು ಹೋಗುತ್ತಿವೆ. ಹೊಸದಾಗಿ ಅದಾನಿ ಸಂಸ್ಥೆ 5200 ಕೋಟಿ ರೂ ವೆಚ್ಚದ ನೂತನ ರನ್ನವೇ ಯೋಜನೆ ಕೈ ಗೆತ್ತಿಕೊಂಡಿದೆ. ಮಂಗಳೂರು ಅಂತಾರಾ ಷ್ಟ್ರೀಯ ವಿಮಾನ ನಿಲ್ದಾಣ, ಬಂದರು,ರೈಲ್ವೇ ಅಭಿವೃದ್ಧಿ ಕಾರ್ಯಗಳು ಆಗಿದೆ. ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗದ ಪ್ರಸ್ತಾಪವನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ನಿಲ್ದಾಣ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಯಾಗುತ್ತಿದೆ. ಎರಡು ಹೊಸ ಪ್ಲಾಟ್‍ಫಾರ್ಮ್‍ಗಳನ್ನು  ನಿರ್ಮಿಸಿದ್ದೇವೆ. ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ 24 ಕೋಟಿ, ಬಂಟ್ವಾಳದ ರೈಲು ನಿಲ್ದಾಣ 25 ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಆಗುತ್ತಿದೆ. ಮಂಗಳೂರು ಜಂಕ್ಷನ್ 350 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆ ಉನ್ನತೀಕರಿಸುವ ಕಾಮಗಾರಿ ನಡೆದಿದೆ,ಸ್ಮಾರ್ಟ್ ಸಿಟಿ, ಅಮೃತ್ ಯೋಜನೆಗಳ ಅಡಿಯಲ್ಲಿ ಮಂಗಳೂರು ನಗರಕ್ಕೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನ ಬಂದಿದೆ. 

ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕಾಂಪ್ಲೆಕ್ಸ್, ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಕ್ರೀಡಾಂಗಣ ನಿರ್ಮಾಣ. ವಾಗಿದೆ. ಸರಕಾರಿ ವೆನ್ಲಾಕ್ ಆಸ್ಪತ್ರೆ  ಅಭಿವೃದ್ಧಿಯಾಗಿದೆ.  ಸಾಗರಮಾಲಾ ಯೋಜನೆಯಲ್ಲಿ ಅನುದಾನ ಕೊಟ್ಟಿದ್ದಾರೆ. ದೇಶದಲ್ಲಿ ಒಂದೇ ಒಂದು ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರ ಕೊಚ್ಚಿಯಲ್ಲಿ. ಇಂದು 1000 ಕೋಟಿ ವೆಚ್ಚ ಮಾಡಿ ಮಂಗಳೂರಿನಲ್ಲಿ ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ಅನಂತಕುಮಾರ್ ಅವರ ಸಚಿವರಾಗಿದ್ದಾಗ ಅನುಮತಿ ನೀಡಿದ ಪ್ಲಾಸ್ಟಿಕ್ ಪಾರ್ಕ ಈಗ ನಿರ್ಮಾಣವಾಗುತ್ತಿದೆ ಶೇ.80ರಷ್ಟು ಕಾಮಗಾರಿ ಪೂರ್ಣ ಗೊಂಡಿದೆ  ಎಂದು ನಳಿನ್ ಮಾಹಿತಿ ನೀಡಿದರು.

ನರೇಂದ್ರ ಮೋದಿ ಸರಕಾರ 1,13,000 ಕೋಟಿ ರೂಪಾಯಿಗಳನ್ನು  ಈ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟಿದೆ.  ಗ್ರಾಮಸ್ವರಾಜ್ಯದ ಕಲ್ಪನೆ ಅಡಿಯಲ್ಲಿ ಸಂಸದರ ಆದರ್ಶ ಗ್ರಾಮದ ಯೋಜನೆ ರೂಪಿಸಲಾಗಿದೆ. ಬಳ್ಪ ಇಂದು 60 ಕೋಟಿ ರೂ ವೆಚ್ಚದಲ್ಲಿ ಆದರ್ಶ ಗ್ರಾಮವಾಗಿ ಅಭಿವೃದ್ಧಿಯಾಗಿದ್ದು ಬಿಜೆಪಿ ಕಾಲದಲ್ಲಿ. ಜಲಜೀವನ್ ಮಿಷನ್ ಅಡಿಯಲ್ಲಿ 1,78,000 ನಳ್ಳಿಗಳ ಜೋಡಣೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 1,50,000 ರೈತರು ಫಲಾನುಭವಿಗಳಾಗಿದ್ದಾರೆ.2009ರಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭ ವಾಗಿದೆ. 100 ಜನೌಷಧಿ ಕೇಂದ್ರ ಆರಂಭ ವಾಗಿದೆ.ಎಂಆರ್ಪಿಎಲ್ ಮೂರನೆ ಹಂತದ ವಿಸ್ತರಣೆ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ.3ಲಕ್ಷ ಜನರಿಗೆವಮುದ್ರಾ ಯೋಜನೆಯಲ್ಲಿ ಸಾಲ ನೀಡಲಾಗಿದೆ. ಚಾರ್ಮಾಡಿ ಘಾಟ್ ರಸ್ತೆ 300 ಕೋಟಿ ರೂಪಾಯಿ ಯೋಜನೆ ಮಂಜೂರಾಗಿದೆ.

ಶಿರಾಡಿ ಸುರಂಗ ಮಾರ್ಗ 2,500 ಕೋಟಿ ರೂಪಾಯಿ ಯೋಜನೆ ಡಿಪಿಆರ್ ಆಗಿದೆ. ಅಡ್ಡಹೊಳೆ-ಬಿಸಿರೋಡ್ ಕಾಮಗಾರಿ,ಬಿಜರ್ನಕಟ್ಟೆ ಸಾಣೂರು ರಸ್ತೆ ಕಾಮಗಾರಿ ಶೀಘ್ರ ಪೂರ್ಣ ಗೋಳ್ಳಲಿದೆ.ನಂತೂರು ಪ್ಲೈ ಓವರ್, ಕೆಪಿಟಿ ಪ್ಲೈ ಓವರ್ 360 ಕೋಟಿ ರೂಪಾಯಿ ಯೋಜನೆ ಟೆಂಡರ್ ಆಗಿದೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಜಿಲ್ಲೆ ಗೆ 17,000 ಕೋಟಿ ರೂಪಾಯಿಮಂಜೂರಾಗಿದೆ.ಮಂಗಳೂರಿನಲ್ಲಿ 75,000 ಗ್ಯಾಸ್  ಪೈಪ್‍ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿದೆ. 2 ಲಕ್ಷ ಸಂಪರ್ಕದ ಗುರಿಯಿದೆ. ಬಿಎಸ್‍ಎನ್‍ಎಲ್‍ನ ಹೊಸ ಟವರ್ ನಿರ್ಮಿಸಲಾಗಿದೆ ಎಂದು ತಾನು ಸಂಸದನಾಗಿದ್ದ ಅವಧಿಯಲ್ಲಿ ನಡೆದ ಯೋಜಬೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ತಾನು ಮುಂದೆ ಪಕ್ಷ ವಹಿಸುವ ಕೆಲಸವನ್ನು ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ವಿವರಿಸಿದರು.

ಮಾಧ್ಯಮ ಸಂವಾದ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ಉಪಸ್ಥಿತರಿದ್ದರು. ವಿಜಯ ಕೋಟ್ಯಾನ್ ಕಾರ್ಯಕ್ರಮ  ನಿರೂಪಿಸಿ ವಂದಿಸಿದರು.