ಮಂಗಳೂರು: ಜೂನ್  23 ರಂದು  ನಿಗದಿಯಾಗಿದ್ದ 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ  ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಮುಂದೂಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.