ಮಂಗಳೂರು: ಜ.06: ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಮೂಲಕ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟ ಉತ್ತಮ ಮಾದರಿ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮ ವಾಸ್ತವ್ಯದಂತಹ ತನ್ನ ಸಮಾಜ ಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯುತ್ತಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟ್ ತಂಡಗಳನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.
ಮುಂದಿನ ತಿಂಗಳು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕ್ರಿಕೇಟ್ ಪಂದ್ಯಾವಳಿ ಯನ್ನು ಹಮ್ಮಿಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು.ರಾಜ್ಯ ಸಮಿತಿಯ ಪದಾಧಿಕಾರಿಗಳಾದ ಟೆಲೆಕ್ಸ್ ರವಿ, ಉಮೇಶ್ ಮಾರ್ಪಳ್ಳಿ, ಇಬ್ರಾಹಿಂ ಅಡ್ಕಸ್ಥಳ, ಗಿರೀಶ್ ಕೋಟೆ, ವಾರ್ತಾ ಧಿಕಾರಿ ಖಾದರ್ ಶಾ, ಮಂಗಳೂರು ಪೊಲೀಸ್ ಆಯುಕ್ತಾಲಯದ ಎಸಿಪಿ ಮಹೇಶ್ ಕುಮಾರ್, ಅತಿಥಿಗಳಾದ ಗಿರೀಶ್ ಕೋಟೆ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಧಿಕಾರಿಗಳಾದ ವಿಜಯ ಕೋಟ್ಯಾನ್, ರಾಜೇಶ್ ದಡ್ಡಂಗಡಿ, ಸಂಘ ಟಕರಾದ ವಿಲ್ಫೇಡ್ ಡಿ ಸೋಜ, ಆರಿಫ್ ಕೆ, ರಾಜೇಶ್ ಪೂಜಾರಿ, ಸಂದೀಪ್ ವಾಗ್ಲೆ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕೆ.ವಿ. ಪ್ರಭಾಕರ್ ರವರನ್ನು ಪಂದ್ಯಾವಳಿಯ ಸಂಘಟಕರ ಪರವಾಗಿ ಗೌರವಿಸಿದರು.