ಮಂಗಳೂರು ಜೂ.6: -2024-25ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ  ಅರ್ಜಿ ಆಹ್ವಾನಿಸಲಾಗಿದೆ. 

 ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ವಿದ್ಯಾರ್ಥಿಗಳು ನಿಗಧಿತ ನಮೂನೆಯ ಅರ್ಜಿಯನ್ನು ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕರ (ಗ್ರೇಡ್1&2) ಕಚೇರಿಗಳಿಂದ ಪಡೆದು, ಭರ್ತಿ ಮಾಡಿ ಶಾಲಾ ಮುಖ್ಯೋಪಾದ್ಯಾಯರಿಂದ ಧೃಡೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್‍ಪಾಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು ಎಂದು  ಸಮಗ್ರ  ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.