ವರದಿ ರಾಯಿ ರಾಜಕುಮಾರ
ಮೂಡುಬಿದಿರೆ: ಶಿರ್ತಾಡಿಯಲ್ಲಿ ನಡೆಯುತ್ತಿರುವ ಮಹಾವೀರ ಕಾಲೇಜಿನ ಪದವಿ ಪೂರ್ವ ವಿಭಾಗದ ಎನ್ ಎಸ್ ಎಸ್ ಶಿಬಿರದಲ್ಲಿ ಅಂಚೆ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಪುತ್ತೂರು ಅಂಚೆ ವಿಭಾಗದ ಮಾರುಕಟ್ಟೆ ವ್ಯವಸ್ಥಾಪಕ ಗುರುಪ್ರಸಾದ್ ಅವರು ಅಂಚೆ ಇಲಾಖೆಯಿಂದ ದೊರಕುವ ವಿವಿಧ ಸೌಲಭ್ಯಗಳ ಬಗ್ಗೆ, ಮಾಹಿತಿಯನ್ನು ನೀಡಿದರು.