ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಇರುವೈಲು ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ ಪೂಜಾರಿಯವರು ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ (ರಿ.) ವತಿಯಿಂದ ನೀಡಲಟ್ಟ ಕ್ಷೀರ ರತ್ನ ರಾಜ್ಯ ಪ್ರಶಸ್ತಿಯಿಂದ ಗೌರವಿಸಲ್ಪಟ್ಟಿದ್ದಾರೆ. ಜೂ. 16 ರಂದು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆಯವರ ಜನ್ಮ ದಿನದ೦ದು ನಡೆದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆಯವರು ಪ್ರಶಸ್ತಿಯನ್ನು ಇರುವೈಲು ತಿಮ್ಮಪ್ಪ ಪೂಜಾರಿ ಅವರಿಗೆ ನೀಡಿ ಗೌರವಿಸಿದರು.
ಸಂಘದ ರಾಜ್ಯಾಧ್ಯಕ್ಷ ಎಂ. ಪ್ರಕಾಶ್ ತಿಮ್ಮಲಾಪುರ, ರಾಜ್ಯ ಕಾರ್ಯಾಧ್ಯಕ್ಷ ಎಂ. ಬಸವರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಆನೆಗುಂದಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.