ಮುಂಬಯಿ: ದೇಶದ ಪ್ರತಿಷ್ಠಿತ ಮಲ್ಟಿಸ್ಟೇಟ್ ಶೆಡ್ಯೂಲ್ಡ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ತನ್ನ 46 ನೇ ಸಂಸ್ಥಾಪನಾ ದಿನವನ್ನು ಬುಧವಾರ (ಆ.21) ರಂದು ಗೋರೆಗಾಂವ್ ಪೂರ್ವದಲ್ಲಿರುವ ತನ್ನ ಕೇಂದ್ರ ಕಚೇರಿಯಲ್ಲಿ ಆಚರಿಸಿತು. ಬ್ಯಾಂಕ್ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣರು ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜೆ ನೆರವೇರಿಸಿ ಆಶೀರ್ವಾದ ಪಡೆದು ತದನಂತರ ಕೇಕ್ ಕತ್ತರಿಸುವುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.
ಬಳಿಕ ಉಪಸ್ಥಿತರಿದ್ದ ಬ್ಯಾಂಕ್ನ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಹಿತೈಷಿಗಳನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣರು ಕಳೆದ ನಾಲ್ಕು ದಶಕಗಳಿಂದ ಭಾರತದ ಅತ್ಯಂತ ಗ್ರಾಹಕ ಸ್ನೇಹಿ ಬ್ಯಾಂಕ್ಗಳಲ್ಲಿ ಒಂದಾಗಿರುವ ಭಾರತ್ ಬ್ಯಾಂಕ್ನ ಮೇಲೆ ಇಟ್ಟಿರುವ ಅಚಲ ಬೆಂಬಲಕ್ಕಾಗಿ ಬ್ಯಾಂಕ್ನ ಎಲ್ಲಾ ಷೇರುದಾರರು, ಗ್ರಾಹಕರು, ಹಿತೈಷಿಗಳು ಮತ್ತು ಎಲ್ಲಾ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸಿದರು. ಎಲ್ಲರೂ ತಮ್ಮ ಸಂಪೂರ್ಣ ಸಮರ್ಪಣೆ ಮತ್ತು ಶ್ರದ್ದೆಯಿಂದ ಬ್ಯಾಂಕ್ನ ಬೆಳವಣಿಗೆಯ ಪ್ರಯಾಣವನ್ನು ಬೆಂಬಲಿಸಬೇಕೆಂದು ಅವರು ವಿನಂತಿಸಿದರು.
ಬ್ಯಾಂಕ್ನ ಉಪಾಧ್ಯಕ್ಷ ಸೋಮನಾಥ ಬಿ ಅಮೀನ್ ಮತ್ತು ನಿರ್ದೇಶಕ ಗಂಗಾಧರ ಜೆ. ಪೂಜಾರಿ ಎಲ್ಲರಿಗೂ ಶುಭ ಹಾರೈಸಿದರು.
ಬ್ಯಾಂಕ್ನ ನಿರ್ದೇಶಕಿ ಹಾಗೂ ಮಾಜಿ ಅಂತಾರಾಷ್ಟ್ರೀಯ ಬ್ಯಾಂಕರ್ ಜಯಶ್ರೀ ಎಂ. ಹೆಜಮಾಡಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ, ಭಾರತ್ ಬ್ಯಾಂಕಿನ ಸೇವೆಯು ಖಾಸಗಿ, ಅಂತಾರಾಷ್ಟ್ರೀಯ ಬ್ಯಾಂಕುಗಳ ಶ್ರೇಣಿಯಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಮೋಹನದಾಸ್ ಜಿ. ಪೂಜಾರಿ, ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ವಿದ್ಯಾನಂದ ಎಸ್. ಕರ್ಕೇರ, ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದಿನೇಶ್ ಬಿ. ಸಾಲಿಯಾನ್ ಮತ್ತು ಮಹಾಪ್ರಬಂಧಕರಾದ ವಿಶ್ವನಾಥ್ ಜಿ. ಸುವರ್ಣ ಹಾಗೂ ಜನಾರ್ದನ್ ಎಂ. ಪೂಜಾರಿ ಉಪಸ್ಥಿತರಿದ್ದರು.