ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಬೆಂಗಳೂರನ್ನು ಅಭಿವೃದ್ಧಿ ಪಡಿಸಿದ ಕೆಂಪೇಗೌಡರು ನಾಡಪ್ರಭು ಎಂದೇ ಪ್ರಸಿದ್ಧರು. ರಾಜ್ಯದ ಇತರ ನಗರಗಳ ಅಭಿವೃದ್ಧಿಗೆ ಮಾದರಿ ಬೆಂಗಳೂರು. ಉದ್ಯಮಿಗಳನ್ನು , ಉದ್ಯೋಗಾರ್ಥಿಗಳನ್ನು ಸೆಳೆಯುವ ಮೂಲಕ ಬೆಂಗಳೂರು ಮಾದರಿ ನಗರವಾಗಿದೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.
ತಾಲೂಕು ಆಡಳಿತ ಸೌಧದಲ್ಲಿ ಜೂನ್ 27ರಂದು ನಡೆದ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ಶ್ರೀಧರ ಮುಂದಲಮನಿ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಆಡಳಿತ ಶೈಲಿ ನಮಗೆಲ್ಲರಿಗೂ ಮಾದರಿಯಾಗಲಿ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಅರುಣ್ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಮುಖ್ಯಅತಿಥಿಗಳಾಗಿದ್ದರು.
ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಶ್ರೀ ನಾಡಪ್ರಭು ಕೆಂಪೇಗೌಡ ಪ್ರಬಂಧ ಸ್ಪರ್ಧೆ ಏರ್ಪಾಡಿಸಲಾಗಿತ್ತು . ಆಳ್ವಾಸ್ ನ ಸಮರ್ಥ ಚಂದ್ರಗೌಡ ನಾಗನಗೌಡ್ರ ಪ್ರಥಮ, ಕ್ಷಮಿತಾ ದ್ಬಿತೀಯ, ಆಕಾಂಕ್ಷ ಎಚ್. ಆಚಾರ್ಯ ತೃತೀಯ ಹಾಗೂ ಸಂಗಮೇಶ ಶಿವಪ್ಪ ಗೂಳಿ ಸಮಾಧಾನಕರ ಬಹುಮಾನ ಗೆದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.