ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಕೃಷಿಕ ಸಮಾಜ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ನಡೆಸಿದ ಸಭೆಯಲ್ಲಿ ಕೃಷಿಕರು ಕೇಳಿದ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ. ರೈತರು ಖರೀದಿಸುವ ವಸ್ತುಗಳ ಚೀಲಗಳಿಗೆ ಒಂದೊಂದು ಅಂಗಡಿಯಲ್ಲಿ ಒಂದೊಂದು ದರ ಇದೆ. ಕೆಲವು ಅಂಗಡಿಗಳಲ್ಲಿ ಸುಮಾರು 300-400 ರೂಪಾಯಿ ವ್ಯತ್ಯಾಸವೂ ಇದೆ. ಈ ಬಗ್ಗೆ ಅಧಿಕಾರಿಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದಾಗ ಅಧಿಕಾರಿಗಳು ನಿರುತ್ತರರಾದರು.