ಪತಂಜಲಿ ಸಂಸ್ಥೆಯ ರಾಮದೇವ್ ಮತ್ತು ಬಾಲಕೃಷ್ಣ ಅವರು ಸುಳ್ಳು ಜಾಹೀರಾತುಗಳ ಸಂಬಂಧ ಸಾರ್ವಜನಿಕವಾಗಿ ಕ್ಷಮೆ ಕೇಳುವುದಾಗಿ ಸುಪ್ರೀಂ ಕೋರ್ಟಿನಲ್ಲಿ ಒಪ್ಪಿಕೊಂಡರು.

ಸರ್ವೋಚ್ಚ ನ್ಯಾಯಾಲಯವು ನಿಮ್ಮನ್ನು ಮುಗ್ಧರೆಂದು ಬಿಟ್ಟು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿತು. ಕೋರ್ಟಿನಲ್ಲಿ ಕ್ಷಮೆ ಕೇಳಿದ ಆರೋಪಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.