ಉಡುಪಿ:  ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಗ್ರಾಮಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, “ಬಿ” ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅಥವಾ ನಿಗಮಗಳ ವೆಬ್‍ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.