ಉಡುಪಿ, ಜೂನ್ 16: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಜೂನ್ 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆಯಲಿದ್ದು, ಜೂನ್ 12 ರ ಒಳಗಡೆ ಪರವಾನಿಗೆ ಕೋರಿ ಸ್ವೀಕರಿಸಿದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಸದರಿ ಸಭೆಗೆ ಸಂಬಂಧಪಟ್ಟ ಅರ್ಜಿದಾರರು ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
