ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಬೆಟ್ಟು-ಪಟ್ಲ ರಸ್ತೆಯ ಬೈಲುಗದ್ದೆ ಬಳಿಯ ರಸ್ತೆ ಮಾರ್ಗದ ಆಗಲೀಕರಣ ಕಾಮಗಾರಿ ಈಗಾಗಲೇ ಕೈಗೊಂಡಿದ್ದು, ಜಿಲ್ಲೆಯಲ್ಲಿ ಅಕಾಲಿಕ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯು ಅಪೂರ್ಣವಾಗಿರುವುದರಿಂದ, ಸದ್ರಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಆದೇಶಿಸಿದ್ದ ಅಧಿಸೂಚನೆಯನ್ನು ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಸ್ತೆ ಅಗಲೀಕರಣ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) ಮತ್ತು (5) ರನ್ವಯ ಹಿರೇಬೆಟ್ಟು-ಪಟ್ಲ ರಸ್ತೆಯ ಬೈಲುಗದ್ದೆ ಬಳಿಯ ರಸ್ತೆ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಜೂನ್ 30 ರವರೆಗೆ ನಿಷೇಧಿಸಿ, ಆತ್ರಾಡಿಯಿಂದ ಬದಲಿ ಮಾರ್ಗವಾಗಿ ಪಟ್ಲ-ಒಂತಿಬೆಟ್ಟು-ಕೊಡಿಬೆಟ್ಟು-ಹಂಗಾರಕಟ್ಟೆ-ವರ್ವಾಡಿ ರಸ್ತೆ ಮೂಲಕ ಮುಂದಕ್ಕೆ ಸಂಚರಿಸುವಂತೆ ಹಾಗೂ ಪಟ್ಲದಿಂದ ಆತ್ರಾಡಿ ಕಡೆ ಸಂಚರಿಸುವವರು ಬದಲಿ ಮಾರ್ಗವಾಗಿ ಪಟ್ಲ-ಪೆರ್ಣಂಕಿಲ ಮೊರಾರ್ಜಿ ದೇಸಾಯಿ ಶಾಲೆಯ ಮುಖಾಂತರ ಓಂತಿಬೆಟ್ಟು-ಕೊಡಿಬೆಟ್ಟು ರಸ್ತೆಯ ಮೂಲಕ ಸಂಚರಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.