ಉಡುಪಿ, ಮೇ 23: ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಸರ್ವೇ ನಂ. 361/1 ರಲ್ಲಿ 15 ಎಕರೆ ಸರ್ಕಾರಿ ಜಮೀನನ್ನು ಜವಳಿ ಪಾರ್ಕ್ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಜವಳಿ ಪಾರ್ಕ್ ಅನುಷ್ಠಾನಗೊಳಿಸಲು ಮಾಸ್ಟರ್ ಡೆವಲಪರ್ ಆಯ್ಕೆಗಾಗಿ ಟೆಂಡರ್ ಆಹ್ವಾನಿಸಲಾಗಿರುತ್ತದೆ. ಸದರಿ ಟೆಂಡರ್ನ ಪ್ರಿ-ಬಿಡ್ ಹಾಗೂ ಆಸಕ್ತ ಉದ್ದಿಮೆದಾರರಿಗೆ ಸದರಿ ಯೋಜನೆಯ ಅನುಷ್ಠಾನ ಕುರಿತಂತೆ ಮಾಹಿತಿ ನೀಡಲು ಮೇ 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ಶಿವಳ್ಳಿ ಇಂಡಸ್ಟ್ರೀಯಲ್ ಏರಿಯಾದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಇಲ್ಲಿ ಸಭೆ ಏರ್ಪಡಿಸಲಾಗಿದ್ದು, ಆಸಕ್ತ ಜವಳಿ ಉದ್ದಿಮೆದಾರರು ಸಭೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
