ಮುಂಬಯಿ: ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಕ್ಯಾಬಿನೆಟ್ ಸಚಿವ ಡಾ| ಕೆ. ಸಿ ನಾರಾಯಣ ಗೌಡ ಸಾರಥ್ಯದ ನಿಯೋಗವು ಕಳೆದ ಮಂಗಳವಾರ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬಯಿಯಲ್ಲಿನ ಮಹಾರಾಷ್ಟ್ರ ಸರ್ಕಾರದ ಕೇಂದ್ರಸ್ಥಾನ ಮಂತ್ರಾಲಯದಲ್ಲಿನ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿ ನೀಡಿತು.
ಮುಂಬಯಿಯಲ್ಲಿ ಸಮುದಾಯದ ಒಕ್ಕಲಿಗರ ಭವನ ನಿರ್ಮಾಣಕ್ಕಾಗಿ ಸಬ್ಸಿಡಿ ದರದಲ್ಲಿ ಭೂಮಿ ಹಂಚಿಕೆ ಅಥವಾ ನಿವೇಶನ ನೀಡುವರೇ ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ (ಐಎಎಸ್) ಅವರನ್ನೂ ಭೇಟಿಮಾಡಲಾಯಿತು.
ನಿಯೋಗದಲ್ಲಿ ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಕೆ ರಾಜೇ ಗೌಡ, ನಿಕಟಪೂರ್ವ ಅಧ್ಯಕ್ಷ ಜಿತೇಂದ್ರ ಜೆ. ಗೌಡ, ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಮತ್ತಿತರರು ಹಾಜರಿದ್ದರು.