ಪರಮಪೂಜ್ಯ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಹಾಗು ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಶ್ರೀ ರಾಮನಾಮ ಸಪ್ತಾಹದ ನಂದಾದೀಪದ ಜ್ಯೋತಿ ಬೆಳಗಿಸುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷರು ಸುದರ್ಶನ ಎಂ. ಭಾಗವಹಿಸಿದರು. ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯ ಸರಕಾರದ ಸಚಿವರಾದ ಕೆ.ಎಸ್.ಈಶ್ವರಪ್ಪ, ಶಾಸಕರಾದ ಹರೀಶ್ ಪೂಂಜ, ಹರೀಶ್ ಕುಮಾರ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಜಯಂತ್ ಕೋಟ್ಯಾನ್, ಪೀತಾಂಬರ ಹೆರಾಜೆ, ಕೇಶವ ಬಂಗೇರ, ಕೃಷ್ಣಪ್ಪ ಪೂಜಾರಿ, ಧನಲಕ್ಷ್ಮೀ, ಕಿರಣ್ ಕೋಡಿಕಲ್ ಹಾಗು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
