ಬೆಳುವಾಯಿ: ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ, ಬೆಳುವಾಯಿ ಇದರ ವತಿಯಿಂದ ಸಮಾಜದ ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಿದರು.
ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘದ ಅಧ್ಯಕ್ಷರಾದ ರಾಜೇಶ್ ಸುವರ್ಣ ಇವರು ಮಕ್ಕಳಿಗೆ ಶುಭ ಕೋರಿದರು ಅಧ್ಯಕ್ಷರಾದ ಶುಭಾ ಸುರೇಶ್ ಪೂಜಾರಿ ಪ್ರಾಸ್ತವಿಕವಾಗಿ ಮಾತನಾಡಿದರು. ಕುಶಲ ಸದಾಶಿವ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಜಯ ಹರೀಶ್ ವಿದ್ಯಾರ್ಥಿಗಳ ಮಾಹಿತಿ ನೀಡಿದರು. ಕೋಶಾಧಿಕಾರಿ ಅನುಷಾ ಸಂದೀಪ್ ಪೂಜಾರಿ ಧನ್ಯವಾದ ಸಮರ್ಪಿಸಿದರು.