Condolence Message by Bishop of Mangalore
“We miss Oscar Fernandes, a good soul of our community who served for the country representing the Mangalorean community’, said Bishop Peter Paul Saldanha. The Catholic community in Mangalore along with priests, nuns and lay faithful are saddened by his demise. Condolences to his wife Mrs Blossom Oscar Fernandes, family members, and near and dear ones, the bishop added.
Condolence Message by Prime Minister of India
Condolence Message by Rajiv Chandrashekhar Minister of State for Skill Development and Entrepreneurship and Electronics and Information Technology of India
Condolence Message by Chief Minister of Karnataka Basavaraja Bommai
Karnataka Chief Minister Chief Minister Basavaraja Bommai tweeted, "I am very sad that Rajya Sabha members and senior Congress leader Oscar Fernandes are missing us today. I wish his soul a lasting peace. And I pray that God will have mercy on his family, the power to end their grief.
Condolence Message by Dr. Sawasthishree Charukeerthi Bhattakara Pandithacharya Varya Maha Swamiji of Jain Mutt
"ಸಜ್ಜನ ರಾಜಕಾರಣಿ ಸರಳ ಮೃದು ಸ್ವಭಾವದ ಶ್ರೀ ಆಸ್ಕರ್ ಫೆರ್ನಾಂಡಿಸ್ ಸ್ವರ್ಗಸ್ಥರಾದ ಸುದ್ದಿ ತಿಳಿಯಿತು ಅಗಲಿದ ಅವರ ಆತ್ಮ ಕ್ಕೆ ಉತ್ತಮ ಸದ್ಗತಿ ಪ್ರಾಪ್ತಿ ಯಾಗಲಿ ನಮ್ಮ ಶ್ರೀ ಮಠ ದ ಸಾವಿರ ಕಂಬ ಬಸದಿಯ ರಥೋತ್ಸವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ರು ದೆಹಲಿಯಲ್ಲಿ ಆಚಾರ್ಯ ವಿದ್ಯಾನಂದ ಮುನಿರಾಜರ ಆಶೀರ್ವಾದ ಪಡೆಯುತ್ತಿದ್ದರು ಅವರ ಅಗಲುವಿಕೆಯಿಂದ ಆಗಿರುವ ದುಃಖ್ಖವನ್ನು ಸಹಿಸುವ ಶಕ್ತಿ ಮೃತರ ಪತ್ನಿ ಕುಟುಂಬದ ಸಮಸ್ತರಿಗೆ ಸಿಗಲಿ ಎಂದು ಶ್ರೀ ಜಿನೇಂದ್ರ ಭಗವ0ತನಲ್ಲಿ ಪ್ರಾರ್ಥಿಸುತ್ತೇವೆ" ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ
Condolence Message by Dr. Verendra Heggade
ಮಾಜಿ ಕೇಂದ್ರ ಸಚಿವಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ಆಸ್ಕರ್ ಫೆರ್ನಾಂಡಿಸ್ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರ. ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವಿಶ್ರಾಂತ ದುಡಿಮೆಗೆ ಇನ್ನೊಂದು ಹೆಸರು ಆಸ್ಕರ್ ಫೆರ್ನಾಂಡಿಸ್.
ನಮ್ಮ ಜಿಲ್ಲೆಯ ಅನೇಕ ಪ್ರಗತಿ ಪರ ಕಾರ್ಯಗಳಿಗೆ ಅವರು ಸರ್ಕಾರದಿಂದ ಯೋಜನೆಗಳನ್ನು ಮಂಜೂರು ಮಾಡಿಸಿ ಪ್ರಗತಿಗೆ ಕಾರಣರಾಗಿದ್ದಾರೆ.
ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ವೈಯಕ್ತಿಕವಾಗಿ ಅಭ್ಯಾಸ ಮಾಡಿ, ತಮ್ಮ ಜೀವನದದಲ್ಲಿ ಅಳವಡಿಸಿಕೊಂಡಿರುವುದಲ್ಲದೆ ತಮ್ಮ ಪತ್ನಿಯನ್ನೂ ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳದ ಶಾಂತಿವನಕ್ಕೆ ಕಳುಹಿಸಿಕೊಡುತ್ತಿದ್ದರು. ಲೋಕಸಭೆಯಲ್ಲಿಯೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಹತ್ವ ಮತ್ತು ಪ್ರಸ್ತುತತೆ ಬಗ್ಯೆ ಪ್ರತಿಪಾದಿಸಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.
Condolence Message by Catholic Sabha Mangalore Pradesh(R)
ರಾಜ್ಯ ಸಭಾ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದ ಶ್ರೀಯುತ ಆಸ್ಕರ್ ಫರ್ನಾಂಡಿಸ್ ಅವರ ಅಗಲಿಕೆಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ರಿ. ಸಂಘಟನೆ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ). ಇದರ ಸ್ಥಾಪಕಾಧ್ಯಕ್ಷರಾಗಿದ್ದ ಶ್ರೀಯುತ ಆಸ್ಕರ್ ಫರ್ನಾಂಡಿಸ್ ಅವರು 1979 ರಿಂದ 1982 ವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಶ್ರೇಯೋಭಿವೃದ್ಧಿಗೆ ಅವಿರತ ಶ್ರಮಿಸಿದ್ದರು. ಕೆಥೊಲಿಕ್ ಸಭಾ ಸಂಘಟನೆಯನ್ನು ಕೇವಲ ಕ್ರೈಸ್ತರ ಸೇವೆಗೆ ಮೀಸಲಾಗಿರಿಸದೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ತೊಡಗಿಸುವಂತೆ ಮಾರ್ಗದರ್ಶನ ನೀಡಿದ್ದರು.
ಐದು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ದಕ್ಷತೆಯಿಂದ ದುಡಿದ ಅವರು, ನಿಷ್ಕಳಂಕ ರಾಜಕಾರಣದ ಮೂಲಕ ಮಾದರಿ ನಾಯಕರಾಗಿದ್ದರು. ರಾಜಕೀಯದಲ್ಲಿ ಉನ್ನತ ಹುದ್ದೆಯನ್ನು ನಿರ್ವಹಿಸಿದ್ದರೂ, ಸರಳ ಸಜ್ಜನಿಕೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ರಾಷ್ಟ್ರ ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದ ಫರ್ನಾಂಡಿಸ್ ಅವರ ನಿಧನದಿಂದಾಗಿ ಕೆಥೊಲಿಕ್ ಸಮುದಾಯ ಓರ್ವ ಅತ್ಯುತ್ತಮ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಬೇಡುತ್ತೇವೆ ಹಾಗೂ ಅಗಲಿಕೆಯ ನೋವನ್ನು ಭರಿಸಲು ಅವರ ಕುಟುಂಬ ಸದಸ್ಯರಿಗೆ ಭಗವಂತನು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ.
ಸ್ಟ್ಯಾನಿ ಲೋಬೊ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ).