ಮಂಗಳೂರು: ಜಿಲ್ಲಾ ವೈದ್ಯಕೀಯ ವಿಭಾಗ ಮತ್ತು ಶ್ರೀ ಗಾಯತ್ರಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ದೈವಜ್ಞ ಮಹಿಳಾ ಮಂಡಳಿ ಸಹಯೋಗದೊಂದಿಗೆ ಕೋವಿಡ್-19 ಲಸಿಕೆ ಅಭಿಯಾನ ಎಪ್ರಿಲ್ 22ರಂದು ಗುರುವಾರ ನಗರದ ಪಂಚಮಹಾಶಕ್ತಿ ಶ್ರೀ ಗಾಯತ್ರಿದೇವಿ, ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಜರಗಲಿರುವುದು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮಾತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯರಾದ ಜಯಶ್ರೀ ಜೆ.ಕುಡ್ವ ಹಾಗೂ ಝೀನತ್ ಶಂಸುದ್ಧೀನ್ ಭಾಗವಹಿಸಲಿರುವರು.
ಅಂದು ಬೆಳಿಗ್ಗೆ 9.30ರಿಂದ ಅಪರಾಹ್ನ 3.30ರವರೆಗೆ ಲಸಿಕೆ ಅಭಿಯಾನ ನಡೆಯಲಿದ್ದು, 45 ವರ್ಷ ಮೇಲ್ಪಟ್ಟವರು ಮಾತ್ರ ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಹಿತಾ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಂಗಳೂರಿನ ದೈವಜ್ಞ ಬ್ರಾಹ್ಮಣ ಸಂಘ, ದೈವಜ್ಞ ಮಹಿಳಾ ಮಂಡಳಿ, ದೈವಜ್ಞ ಯುವಕ ಮಂಡಳಿ, ದೈವಜ್ಞ ಚಿನ್ನ- ಬೆಳ್ಳಿ ಕೆಲಸಗಾಗ ಸಂಘ ಹಾಗೂ ಪಂಚಮಹಾಶಕ್ತಿ ಶ್ರೀ ಗಾಯತ್ರಿದೇವಿ, ಸಿದ್ಧಿವಿನಾಯಕ ಸೇವಾ ಸಮಿತಿ ಮನವಿ ಮಾಡಿದೆ.