ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆಗಳು ಒಕ್ಕೂಟ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮೇ, 24ರಂದು ಎಸೆಂಟ್ ಸಭಾಂಗಣದಲ್ಲಿ ಗ್ರಾಹಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ಪ್ರಧಾನಿಸಲಾಯಿತು. ಕಳೆದ 4 ದಶಕಗಳಿಂದ ಗ್ರಾಹಕ ಜಾಗೃತಿ ಕಾರ್ಯಕ್ರಮವನ್ನು ನೀಡಲಾಗುತ್ತಿದೆ. ಇಂದಿನ ವಿದ್ಯಾರ್ಥಿಗಳು ಇಂತಹ ಇನ್ನಷ್ಟು ಮಾಹಿತಿಯನ್ನು ಕಲಿಯುವುದರಿಂದ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದೆಂದು ಜಿಲ್ಲಾ ಗ್ರಾಹಕ ಸಂಘಟನೆಯ ಒಕ್ಕೂಟದ ಅಧ್ಯಕ್ಷ ಎಮ್. ಜೆ. ಸಾಲ್ಯಾನ್ ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರು. ವೇದಿಕೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿಮೆಲ್ಲೊ, ರಫೀಕ್ ಕುಕ್ಕಾಡಿ, ಜಯಪ್ರಕಾಶ್ ರಾವ್ ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುಮಾರ್ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು.

ವಿವಿಧ 8 ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಪ್ರಮಾಣ ಪತ್ರವನ್ನು ವಿತರಿಸಿದರು. ಒಕ್ಕೂಟದ ಕಾರ್ಯದರ್ಶಿ ಸುನಂದ ಕುಂಬ್ಲೆಯವರು ಸ್ವಾಗತಿಸಿದರು. ಕಾಲೇಜಿನ ಎನ್‌ಎಸ್‌ಎಸ್ ಘಟಕದ ಕಾರ್ಯದರ್ಶಿ ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು ಡಿ.ಆರ್. ಸುನಂದ ದಂಬೇಕೋಡಿ ವಂದಿಸಿದರು.