ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಇವರ ವತಿಯಿಂದ “ಯಕ್ಷ ಧ್ರುವ-ಯಕ್ಷ ಶಿಕ್ಷಣ ” ಯಕ್ಷಗಾನ ಶಿಕ್ಷಣ ಅಭಿಯಾನದ ಪ್ರಸ್ತುತ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸಂಸ್ಥೆಯ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷರು ಹಾಗೂ ಕೇಂದ್ರ ಸದಸ್ಯರಾದ ಶ್ರೀಪತಿಭಟ್ ರವರು ಉದ್ಘಾಟಿಸಿದರು. 

ವೇದಿಕೆಯಲ್ಲಿ KMF ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಕೆ ಸುಚರಿತ ಶೆಟ್ಟಿ, ಯಕ್ಷ ಧ್ರುವ ಪಟ್ಲ ಫೌಂಡೇಷನ್ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಖಂಡಿಗೆ, ಸಂಚಾಲಕರಾದ ರವಿ ಪ್ರಸಾದ್ ಕೆ ಶೆಟ್ಟಿ, ಉಪಾಧ್ಯಕ್ಷರಾದ ಸದಾಶಿವ ರಾವ್ ನೆಲ್ಲಿಮಾರು,  ಯಕ್ಷ ಗುರುಗಳಾದ ಅನ್ವಿತಾ ಕೆರೆಕಾಡು ವೇದಿಕೆಯಲ್ಲಿ ಇದ್ದರು.