ಮಂಗಳೂರು: ದ.ಕ. ಜಿಲ್ಲೆ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ಇವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ಗಳು ವಿಧಾನ ಪರಿಷತ್ ಶಾಸಕಾದ ಐವನ್ ಡಿʼಸೋಜಾರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಭೇಟಿ ನೀಡಿ ವಿಸ್ತೃತವಾಗಿ ವಿಚಾರ ವಿನಿಮಯ ನಡೆಸಿದರು. ಮಳೆಗಾಲದಲ್ಲಿ ಉಂಟಾದ ಮಳೆಹಾನಿ ಪರಿಹಾರದ ಬಗ್ಗೆ ಮಳೆಹಾನಿಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡಸಿದರು. ಜಿಲ್ಲಾಧಿಕಾರಿಗಳಿಗೆ ನಗರ ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ಉಂಟಾದ ಗುಡ್ಡ ಕುಸಿತ ಮತ್ತು ಮನೆಗಳಿಗೆ ನೀರು ನುಗ್ಗಿ ಆಗುವ ಅನಾಹುತಗಳಿಗೆ ಮತ್ತು ಇನ್ನಿತರ ಯಾವುದೇ ಅನಾಹುತಗಳಿಗೆ ಮಳೆಹಾನಿಯಿಂದಾದ ನಷ್ಟಕ್ಕೆ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಒಳಚರಂಡಿ ವ್ಯವಸ್ತೆ ಅದೇ ರೀತಿ ರಾಜಕಾಲುವೆ ಒತ್ತುವರಿ ಮಾಡಿ ಬೇರೆ ಕಡೆ ತಿರುಗಿಸಿದುರ ಬಗ್ಗೆ, ರಾಜಕಾಲುವೆಗೆ ಕಳಪೆಕಾಮಗಾರಿಗಳ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಮತ್ತು ಈ ಬಗ್ಗೆ ಯಾರ್ಯಾರು ರಾಜಕಾಲುವೆಯನ್ನು ಒತ್ತುವರಿ ಮಾಡಿ ಬೇರೆ ಕಡೆ ತಿರುಗಿಸಿದ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.
ಮಂಗಳೂರು ನಗರ ಪಾಲಿಕೆಯ ಅಡಳಿತ ವ್ಯವಸ್ಥೆಯಲ್ಲಿ ಸಮಗ್ರವಾಗಿ ಬದಲಾವಣೆ ತರುವಂತಹ ಆಡಳಿತ ವ್ಯವಸ್ಥೆ ತರಬೇಕು ಮತ್ತು ಮಹಾನಗರ ಪಾಲಿಕೆಯಲ್ಲಿ ನಡೆಯುವ ಭ್ರಷ್ಠಚಾರದ ವಿರುದ್ದ ತನಿಖೆ ನಡೆಸಬೇಕು. ಕಾನೂನು ಬಾಹಿರವಾಗಿ ನಡೆಯುವ ಅನೇಕ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.
ಪಂಪ್ ವೆಲ್ ಮತ್ತು ಇತರ ಕಡೆಗಳಲ್ಲಿ ಉಂಟಾದ ಕೃತಕ ನೆರೆಗಳ ಬಗ್ಗೆ ಪರಿಹಾರ ಕಂಡು ಹಿಡಿಯುವಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿ ಸಮರ್ಪಕವಾದ ವರದಿಯನ್ನು ತಯಾರಿಸಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಲಾಯ್ತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಕಸದ ವಿಲೇವಾರಿ ಬಗ್ಗೆಯೂ ಕೂಡ ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ದೆ, ಕಾರ್ಪೋರೇಟರ್ಗಳಾದ ಪ್ರವೀಣ್ಚಂದ್ರ ಆಳ್ವ ಪ್ರಕಾಶ್ ಸಾಲಿಯಾನ್ ಶಂಶುದ್ದೀನ್ ಕುದ್ರೋಳಿ, ಲ್ಯಾನ್ಸ್ ಲೋಟ್ ಪಿಂಟೋ, ಅಶ್ರಫ್ ಬಜಾಲ್, ಸತೀಶ್ ಪೆಂಗಲ್, ಕಿಶೋರ್ ಶೆಟ್ಟಿ, ಹೇಮಂತ್ ಗರೋಡಿ, ಪ್ರೇಮ್ ಬಲ್ಲಾಳ್ ಬಾಗ್ ಮುಂತಾದವರು ಜೊತೆಗಿದ್ದರು.