ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದರೆ ತಾಲೂಕಿನಾದ್ಯಂತ ಈಗಾಗಲೇ ಮಳೆ ಸುರಿಯುತ್ತಿದ್ದು ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ಸಂಭವಿಸಿದಲ್ಲಿ ಮುನ್ನೆಚ್ಚರಿಕೆ ವಹಿಸಲು ಸಿದ್ಧರಾಗಬೇಕೆಂದು ಮೇ 21 ರಂದು ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ಎಲ್ಲಾ ಅಧಿಕಾರಿಗಳನ್ನು ಕರೆದು ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸದಾ ಜಾಗರೂಕರಾಗಿ ಇರಬೇಕೆಂದು ತಿಳಿಸಿದರು. ಯಾವುದೇ ಪರಿಸ್ಥಿತಿಯನ್ನು ಬಹಳ ಸೂಕ್ಷ್ಮದಿಂದ ಗಮನಿಸುತ್ತಾ ಜಾಣ್ಮೆಯಿಂದ ನಿರ್ವಹಿಸಬೇಕೆಂದು ತಿಳಿಹೇಳಿದರು.