ಮಾಜಿ ಶಾಸಕರಾದ ಜೆ. ಆರ್. ಲೋಬೊರವರು ನಗರದ ಬೆಂದೂರು ಸೈಂಟ್ ಸೆಬಾಸ್ಟಿಯನ್ ಹಾಲ್ ನಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಳಪಾಡ್ ರವರ ಉಪಸ್ಥಿತಿಯಲ್ಲಿ ನಡೆದ ಯುವ ಜಾಗೃತಿ ಸಮಾವೇಶ ಮತ್ತು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಯುವಕರು ಈ ದೇಶದ ಶಕ್ತಿ, ಈ ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಮಹತ್ವರವಾದ ಜವಾಬ್ದಾರಿ ಯುವ ಕಾಂಗ್ರೆಸಿನ ಮೇಲಿದೆ. ಈ ಜವಾಬ್ದಾರಿ ಅರಿತು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಈ ದೇಶದ ಚುಕ್ಕಾಣಿಯನ್ನು ಹಿಡಿದು ಈ ದೇಶ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ಶುಭ ಸಂದೇಶದಲ್ಲಿ ತಿಳಿಸಿದರು.